ಗುರುವಾರ, ಆಗಸ್ಟ್ 12, 2010

ಅವಳು

ಒದ್ದೆ ಪಾದಗಳ ಹೆಜ್ಜೆ ಜಾಡಿನಲ್ಲಿ ನಡೆಯಹೊರಟವಳು
ಕಾರಿರುಳ ಬಾನಿನಲಿ ಚಂದಿರನ ಹುಡುಕಿದಳು
ನದಿಯಲ್ಲದವಳು ಎಲೆಯಮೇಲೆ ಬಿದ್ದ ಮಳೆಹನಿಯಂಥವಳು
ಕಡಲ ಸೇರಲು ಹೊರಟಳು.
ದನಿಯಿಲ್ಲದವಳು ಮೌನಿ ಶಿಲೆಯಂಥವಳು
ಎದೆರಾಗವಾಗಲವಣಿಸಿದಳು.
ಬಾನಲ್ಲಿ ರವಿ ಜಾರಿದಾಗ ಕವಿದ ಮುಸ್ಸಂಜೆಯಂಥವಳು
ಎಣ್ಣೆಯಾರಿದ ಹಣತೆಯನು ಕಣ್ಬೆಳಕಿನಲಿ ಬೆಳಗುವವನಿಗಾಗಿ ಕಾದಳು...

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ